ADVERTISEMENT

ನಂಜನಗೂಡು | ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಬಸ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 13:53 IST
Last Updated 19 ಜೂನ್ 2024, 13:53 IST
ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿ ಗ್ರಾಮದ ಬಳಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿರುವ ಬಸ್‌
ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿ ಗ್ರಾಮದ ಬಳಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿರುವ ಬಸ್‌   

ನಂಜನಗೂಡು: ತಾಲ್ಲೂಕಿನ ದೇವರಾಯಶೆಟ್ಟಿ ಗ್ರಾಮದ ಬಳಿ ಮಂಗಳವಾರ ಕೆ.ಎಸ್.ಆರ್.ಟಿ.ಸಿ. ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದೆ.

ಬೇಗೂರಿನಿಂದ ನಂಜನಗೂಡಿನ ಕೊತ್ತನಹಳ್ಳಿ ಗ್ರಾಮದ ಮಾರ್ಗವಾಗಿ ಎಚ್.ಡಿ.ಕೋಟೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ ನಿಯಂತ್ರಣ ತಪ್ಪಿದರೂ ಚಾಲಕನ ಸಮಯಪ್ರಜ್ಞೆಯಿಂದಾಗಿ ಜಮೀನಿಗೆ ನುಗ್ಗಿದ್ದು, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT