ADVERTISEMENT

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿ ಹುಲಿ ದಾಳಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2023, 7:26 IST
Last Updated 3 ಅಕ್ಟೋಬರ್ 2023, 7:26 IST
<div class="paragraphs"><p>ಹುಲಿ– ಸಾಂದರ್ಭಿಕ ಚಿತ್ರ</p></div>

ಹುಲಿ– ಸಾಂದರ್ಭಿಕ ಚಿತ್ರ

   

ಹನಗೋಡು: ಇಲ್ಲಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಉಡುವೆಪುರ ಗ್ರಾಮದ ಗಣೇಶ್ (58) ಅವರು ಸೋಮವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟರು.

ಸಂಜೆ ದನಗಳಷ್ಟೆ ಮನೆಗೆ ಬಂದಿದ್ದವು. ಆದರೆ, ಗಣೇಶ್ ಬಾರದಿರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ಹುಡುಕಾಡಿದಾಗ ಶವ ಪತ್ತೆಯಾಗಿದೆ.

ADVERTISEMENT

ಆ ಪ್ರದೇಶದ ಜನರಲ್ಲಿ ಆತಂಕ ನಿರ್ಮಾಣವಾಗಿದೆ. ಜನರು ಓಡಾಡಲು ಹೆದರುತ್ತಿದ್ದು, ಹುಲಿ ಸೆರೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.