ಮೈಸೂರು: ಹಜ್ ಯಾತ್ರೆಗೆ ತೆರಳುವ 549 ಯಾತ್ರಾರ್ಥಿಗಳಿಗೆ ಮಂಗಳವಾರ ನಗರದ ಉದಯಗಿರಿಯಲ್ಲಿ ಲಸಿಕೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಹಜ್ ಸಮಿತಿಯಿಂದ ಹಜ್ ಯಾತ್ರಾರ್ಥಿಗಳಿಗೆ ಲಸಿಕಾ ಶಿಬಿರ ಆಯೋಜಿಸಲಾಗಿತ್ತು.
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ಚಾಲನೆ ನೀಡಿ, ‘ಜಿಲ್ಲೆಯ 428 ಮಂದಿ, ಕೊಡಗಿನ 73 ಮತ್ತು ಚಾಮರಾಜನಗರದ 56 ಮಂದಿ ವಿವಿಧ ಸೋಂಕು ನಿರೋಧಕ ಲಸಿಕೆಯನ್ನು ಪಡೆದಿದ್ದಾರೆ. ಸಾಮಾನ್ಯವಾಗಿ ಬೇರೆ ದೇಶ, ರಾಜ್ಯಗಳಿಗೆ ತೆರಳುವ ಪ್ರಯಾಣಿಕರು ಕಾಯಿಲೆಗಳಿಗೆ, ವಿಭಿನ್ನ ಸೋಂಕುಗಳಿಗೆ ತುತ್ತಾಗುವ ಸಾಧ್ಯತೆಯಿದ್ದು, ಈ ಲಸಿಕೆಗಳು ಕಾಯಿಲೆ ಬಾರದಂತೆ ತಡೆಯುತ್ತವೆ’ ಎಂದು ಹೇಳಿದರು.
ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಎಂ.ಎಸ್. ಜಯಂತ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿರಾಜ್ ಅಹ್ಮದ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.