ADVERTISEMENT

ಲಾರಿಗೆ ವಿದ್ಯುತ್ ತಂತಿ ತಗುಲಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 15:59 IST
Last Updated 15 ಫೆಬ್ರುವರಿ 2024, 15:59 IST

ಮಾನ್ವಿ: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ (ಹೈಟೆನ್ಶನ್ ವೈ‌ರ್) ತಗುಲಿ ಲಾರಿಯಲ್ಲಿದ್ದ ಹಿಟಾಚಿ ಚಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಯಡಿವಾಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಜಾರ್ಖಂಡ್ ಮೂಲದ ಅಜಯ್ ಕುಮಾರ್ (35) ಎಂದು ಗುರುತಿಸಲಾಗಿದೆ.

ಲಾರಿಯಲ್ಲಿ ಹಿಟಾಚಿ ವಾಹನವನ್ನು ಸ್ಥಳಾಂತರ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ADVERTISEMENT

ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಶಾರ್ಟ್‌ ಸರ್ಕಿಟ್ ಆಯಿತು. ಇದರಿಂದ ಲಾರಿಯು ಏಕಾಏಕಿ ಬೆಂಕಿಯಿಂದ ಹೊತ್ತಿ ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಲಾರಿ ಚಾಲಕ ಮಲ್ಲಿಕಾರ್ಜುನ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.