ರಾಯಚೂರು: ತಾಲ್ಲೂಕಿನ ಮಂತ್ರಾಲಯ ರಸ್ತೆಯಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಮಿಟ್ಟಿಮಲ್ಕಾಪುರ ಕ್ರಾಸ್ ಬಳಿ ಬುಧವಾರ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಯಚೂರು ಇಂದಿರಾನಗರದ ರಾಘವೇಂದ್ರ (28) ಪರುಶುರಾಮ್ (30) ಹಾಗೂ ಗೋವಿಂದ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆಯಲ್ಲಿ ಮಂತ್ರಾಲಯ ರಸ್ತೆಯಲ್ಲಿ ಅಪರಿಚಿತ ವಾಹನ ಹಾಯ್ದ ಬೈಕ್ ಸವಾರ ಗಾಣದಾಳ ಗ್ರಾಮದ ಪ್ರಾಣೇಶ್ (19) ಪ್ರಾಣೇಶ ಮೃತಪಟ್ಟಿದ್ದಾರೆ. ಆಂಜನೇಯ ಪೂಜಾರ ಗಂಭೀರವಾಗಿ ಗೊಂಡಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಯರಗೇರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.