ಸಿಂಧನೂರು: ನಗರದ ಬಪ್ಪುರ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಿಡಿಗೋಳ ಆಂಜನೇಯ ಸ್ವಾಮಿಯ ಮೂರ್ತಿ ಪ್ರತಿಷ್ಠಾಪಣೆ ಸಮಾರಂಭ ಫೆ.22 ರಂದು ಜರುಗಲಿದ್ದು ಎಪಿಎಂಸಿ ಗಜಾನನ ದೇವಸ್ಥಾನದಿಂದ ಫೆ.12 ರಂದು ಮೂರ್ತಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಾಗರ ಹನುಮಾನ ಸೇವಾ ಟ್ರಸ್ಟ್ ಅಧ್ಯಕ್ಷ ರಂಗಣ್ಣ ದೇಸಾಯಿ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆ.22ರಂದು ಗಣ ಹೋಮ, ನವಗ್ರಹ ಹೋಮ, ಪ್ರತಿಷ್ಠಾಪಣಾ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಸಮರ್ಪಣೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.