ಮುದಗಲ್: ಸಮೀಪದ ರಾಮಾತ್ನಾಳ ಗ್ರಾಮದಲ್ಲಿ ಅನ್ನದಾನೇಶ್ವರ ಜಾತ್ರಾ ಮಹೋತ್ಸವ ಹಾಗೂ ಪ್ರವಚನ ಮಂಗಲ ಕಾರ್ಯಕ್ರಮ ಮಂಗಳವಾರ ಜರುಗಿತು.
ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆಗಳು ನಡೆದವು. ಸಂಜೆ ವಿವಿಧ ವಾದ್ಯಮೇಳದೊಂದಿಗೆ ರಥೋತ್ಸವ ಜರುಗಿತು. ರಾತ್ರಿ ಅನ್ನದಾನೇಶ್ವರ ಕಾರ್ತಿಕೋತ್ಸವ ಕಾರ್ಯಕ್ರಮ ಜರುಗಿತು.
ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಾಂತಲಿಂಗ ಶಿವಾಚಾರ್ಯರು, ಶಿವಲಿಂಗ ಸ್ವಾಮೀಜಿ, ರಾಮಾತ್ನಾಳ ಗ್ರಾಮಸ್ಥರು, ಸುತ್ತಲಿನ ಗ್ರಾಮಗಳ ಭಕ್ತರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.