ADVERTISEMENT

ರಾಯಚೂರು: ಮೂಲ ಸೌಕರ್ಯ ಒದಗಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 16:13 IST
Last Updated 22 ಡಿಸೆಂಬರ್ 2023, 16:13 IST
ಲೋಕ ಜನಶಕ್ತಿ ಪಾರ್ಟಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು
ಲೋಕ ಜನಶಕ್ತಿ ಪಾರ್ಟಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು   

ರಾಯಚೂರು: ನಗರದಲ್ಲಿ ಗುಣಮಟ್ಟ ರಸ್ತೆ ಹಾಗೂ ಸ್ವಚ್ಛ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ಲೋಕ ಜನಶಕ್ತಿ ಪಾರ್ಟಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ  ಮನವಿ ಸಲ್ಲಿಸಿದರು.

ನಗರದ ಗದ್ವಾಲ್ ರಸ್ತೆ ಸಂಪೂರ್ಣ ಹದಗೆಟ್ಟಿದೆ. 6 ತಿಂಗಳಾದರೂ ದುರಸ್ತಿಗೊಳಿಸುತ್ತಿಲ್ಲ. ರಸ್ತೆಯ ಮೇಲೆ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ. ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಆಗದೇ ಪರಿತಪಿಸುವಂತಾಗಿದೆ. ಶೀಘ್ರವೇ ರಸ್ತೆ ದುರಸ್ತಿಗೊಳಿಸಿ ನಗರಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಗೋವಿಂದ, ರಂಗಪ್ಪ, ನಾರಾಯಣ ಕೆ., ಶೇಖರಪ್ಪ, ತಿಮ್ಮಪ್ಪ, ರಘುನಂದ ಯಾದವ, ಅಶ್ರಫ್ ಪಾಷ, ಹಂಪಯ್ಯ ಹಾಗೂ ಉಮೇಶ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.