ADVERTISEMENT

ರಾಯಚೂರು | ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 15:46 IST
Last Updated 6 ಏಪ್ರಿಲ್ 2024, 15:46 IST

ರಾಯಚೂರು: ಕೆಲಸಕ್ಕೆಂದು ವಲಸೆ ಬಂದಿದ್ದ ಬಿಹಾರ ರಾಜ್ಯದ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಮೃತ ಕಾರ್ಮಿಕನ್ನು ಮೊಹಮ್ಮದ್ ದಾನೀಶ್ (34) ಎಂದು ಗುರುತಿಸಲಾಗಿದೆ. ರಾಯಚೂರು ತಾಲ್ಲೂಕಿನ ಚಂದ್ರಬಂಡಾ ಹೋಬಳಿಯ ರಸ್ತೆಯಲ್ಲಿ ಹಾಕಿದ ಶೆಡ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಶವ ಪತ್ತೆಯಾಗಿದೆ. ದಾನೀಶ್ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ಎನ್ನಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. 

ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.