ADVERTISEMENT

ಜಾಲಹಳ್ಳಿ | ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 14:19 IST
Last Updated 3 ಅಕ್ಟೋಬರ್ 2024, 14:19 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಜಾಲಹಳ್ಳಿ: ಎಚ್.ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಗೆ ಬರುವ ಅಣಜೇರದೊಡ್ಡಿಯಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು ಬಸಮ್ಮ ಮುದಕಪ್ಪ ಮುರಾಳ(55) ಎಂಬ ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ.

ಕೃಷಿ ಜಮೀನಲ್ಲಿಯೇ ಮನೆ ಕಟ್ಟಿಕೊಂಡು ಅಲ್ಲಿಯೇ ವಾಸವಾಗಿದ್ದರು. ರಾತ್ರಿ ಭಾರಿ ಮಳೆ, ಗುಡುಗು, ಮಿಂಚು, ಗಾಳಿ ಪ್ರಾರಂಭವಾಗಿತ್ತು. ಸಿಡಿಲು ಬಡಿದು ಒಬ್ಬ ಮಹಿಳೆ ಮೃತಪಟ್ಟರೆ, ಆಕೆಯ ಮಗ ಗರುಡಪ್ಪ ನಾಯಕಗೂ ಸಣ್ಣ,ಪುಟ್ಟ ಗಾಯವಾಗಿದ್ದು, ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಅಲ್ಲದೇ ಒಂದು ಎಮ್ಮೆ ಕೂಡ ಸಾವನ್ನಪ್ಪಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.