ಮಾನ್ವಿ: ಪಟ್ಟಣದ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ದಿನಪತ್ರಿಕೆ ವಿತರಣೆ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ ವಿತರಿಸಲಾಯಿತು.
ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಮಾತನಾಡಿ, ‘ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಅಡಿಯಲ್ಲಿ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.
ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಬಸನಗೌಡ ಮೇಟಿ, ಕಾರ್ಯದರ್ಶಿ ಬಾಬು ಬೆಟ್ಟದೂರು, ಸದಸ್ಯರಾದ ಜಹಾಂಗೀರ್ ಪಾಷಾ ನೀರಮಾನ್ವಿ, ಬಸವರಾಜ ಬಳಗಾನೂರ, ರಮೇಶ ಕೊರಿಯರ್, ಶ್ರೀಕಾಂತ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.