ADVERTISEMENT

‘ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ ನಿಗದಿ’

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 14:46 IST
Last Updated 6 ಅಕ್ಟೋಬರ್ 2024, 14:46 IST

ಸಿಂಧನೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಾಲ್ಲೂಕು ಚುನಾವಣಾಧಿಕಾರಿ ಬಿ.ರವಿಯಪ್ಪ ತಿಳಿಸಿದ್ದಾರೆ.

ಭಾನುವಾರ ಹೇಳಿಕೆ ನೀಡಿರುವ ಅವರು ರಾಜ್ಯ ಚುನಾವಣಾಧಿಕಾರಿಗಳ ಅಧಿಸೂಚನೆಯನ್ವಯ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ. ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗಳು ಅಕ್ಟೋಬರ್ 9 ರಿಂದ 28ರ ವರೆಗೆ, ತಾಲ್ಲೂಕು ಶಾಖೆ, ಯೋಜನಾ ಶಾಖೆಗಳ ಹಾಗೂ ತಾಲ್ಲೂಕು ಯೋಜನಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರ ಸ್ಥಾನದ ಚುನಾವಣೆಗಳನ್ನು ಅಕ್ಟೋಬರ್ 28ರಿಂದ ನ.16ರ ವರೆಗೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅ.9 ರಿಂದ 18ರ ವರೆಗೆ ನಿಗದಿ ಪಡಿಸಲಾಗಿದೆ. ಅ.19 ರಂದು ನಾಮಪತ್ರ ಪರಿಶೀಲನೆ ನಡೆದು ಅರ್ಹ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು. ಉಮೇದುವಾರಿಕೆ ಸಲ್ಲಿಸಲು ಅ.21 ಕೊನೆಯ ದಿನವಾಗಿದೆ. ಅ.28 ರಂದು ಮತದಾನ ನಡೆಯಲಿದೆ. ಅಂದು ಸಂಜೆ ಮತಗಳ ಎಣಿಕೆ ನಡೆದು ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.