ADVERTISEMENT

ಮಾನ್ವಿ: KPSVS ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 1:46 IST
Last Updated 19 ಅಕ್ಟೋಬರ್ 2024, 1:46 IST
   

ಮಾನ್ವಿ: ಆಡಳಿತ ಮಂಡಳಿಯಿಂದ ಅನಧಿಕೃತವಾಗಿ ಹೆಚ್ಚುವರಿ ಶುಲ್ಕ ವಸೂಲಿ, ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಸಮಸ್ಯೆಗಳ ನಿವಾರಣೆಗೆ ನಿರ್ಲಕ್ಷ್ಯ ವಿರೋಧಿಸಿ ಪಟ್ಟಣದ ಕೆಪಿಎಸ್‌ವಿಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.

ಕಾಲೇಜಿನ ಶುಲ್ಕ ಪಾವತಿ ವಿಳಂಬವಾದರೆ ಬಡ್ಡಿ ಸಮೇತ ಪಾವತಿಸಲು ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ವಿಷಯ ತಿಳಿಯುತ್ತಿದ್ದಂತೆ ಪಿಎಸ್ಐ ವೀರನಗೌಡ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದರು. ನಂತರ ಪ್ರಾಂಶುಪಾಲ ಡಾ.ಜೀವನೇಶ್ವರಯ್ಯ ಜೊತೆಗೆ ಚರ್ಚಿಸಿದರು. ಶನಿವಾರ ಪ್ರತಿಭಟನೆ ಮುಂದುವರೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.