ಲಿಂಗಸುಗೂರು: ಇಲ್ಲಿನ ರಾಯಚೂರು ರಸ್ತೆಯ ಟ್ರ್ಯಾಕ್ಟರ್ ಷೋರೂಮ್ ಬಳಿ ನಿಲ್ಲಿಸಿದ್ದ ಕಾರಿನಲ್ಲಿದ್ದ ₹3 ಲಕ್ಷಗಳನ್ನು ಅಪರಿಚಿತರು ಕದ್ದು ಪರಾರಿಯಾಗಿದ್ದಾರೆ.
ಬುಧವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಪ್ರವಾಸಿ ಮಂದಿರ) ಶಾಖೆಯಲ್ಲಿ ₹3 ಲಕ್ಷ ಡ್ರಾ ಮಾಡಲಾಗಿತ್ತು. ಟ್ರ್ಯಾಕ್ಟರ್ ಷೋ ರೂಮ್ ಬಳಿ ಕಾರು ನಿಲ್ಲಿಸಿದ್ದಾಗ ಬೈಕ್ ಮೇಲೆ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಮ್ಮಯ್ಯ ಕೃಷ್ಟಯ್ಯ ದಾಸರ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪಿಎಸ್ಐ ರತ್ನಮ್ಮ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಪೊಲೀಸ್ ಇನ್ಸ್ಪೆಕ್ಟರ್ ಪುಂಡಲಿಕ ಪಟತ್ತರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.