ADVERTISEMENT

ಸಿರವಾರ | ಕಡಿಮೆ ರಕ್ತದೊತ್ತಡ; ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 15:19 IST
Last Updated 11 ಸೆಪ್ಟೆಂಬರ್ 2024, 15:19 IST
ಮೃತ ವಿದ್ಯಾರ್ಥಿ ತರುಣ ಕುಮಾರ
ಮೃತ ವಿದ್ಯಾರ್ಥಿ ತರುಣ ಕುಮಾರ   

ಸಿರವಾರ: ಪಟ್ಟಣದ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣಕುಮಾರ (14) ಮಂಗಳವಾರ ಕಡಿಮೆ ರಕ್ತದೊತ್ತಡದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಶಾಲಾ ವಿರಾಮದ ವೇಳೆ ತರುಣಕುಮಾರ ಶೌಚಾಲಯದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದ. ಆಡಳಿತ ಮಂಡಳಿ ಮತ್ತು ಶಿಕ್ಷಕರು ವಿದ್ಯಾರ್ಥಿಗೆ ಕೂಡಲೇ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. 

ಮೃತ ತರುಣಕುಮಾರ ತಾಲ್ಲೂಕಿನ ಅತ್ತನೂರು ಗ್ರಾಮದ ಮಲ್ಲೇಶ ಎಂಬುವವರ ಪುತ್ರ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.