ಸಿಂಧನೂರು: ‘ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ) ತಾಲ್ಲೂಕು ಘಟಕದ ನೇತೃತ್ವದಲ್ಲಿ ಫೆಬ್ರವರಿ 21 ರಂದು ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ 51 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಕರವೇ ಕಲಾವಿದರ ಘಟಕ ಅಧ್ಯಕ್ಷ ಬಸವರಾಜ ಗಸ್ತಿ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ರಾಜ್ಯ ಘಟಕದ ಅಧ್ಯಕ್ಷ ಟಿ.ನಾರಾಯಣಗೌಡ ಸೇರಿ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಸ್ಥಳೀಯ ನಾಯಕರು ಆಗಮಿಸಲಿದ್ದಾರೆ. ವಿವಿಧ ಸಮಿತಿ ರಚಿಸಿ ಜವಾಬ್ದಾರಿ ವಹಿಸಲಾಗಿದೆ’ ಎಂದರು.
ನೋಂದಾಯಿಸುವವರು ಮತ್ತು ಹೆಚ್ಚಿನ ಮಾಹಿತಿಗಾಗಿ ವೀರೇಶ ಗೋನವಾರ (9620091050) ಅವರನ್ನು ಸಂಪರ್ಕಿಸಬೇಕು. ಕಾಲುಂಗುರ, ತಾಳಿಯನ್ನು ವೇದಿಕೆಯೇ ನೀಡಲಿದೆ. ಫೆ.10 ಹೆಸರು ನೋಂದಾಯಿಸಿಕೊಳ್ಳಲು ಕೊನೆಯ ದಿನ ಎಂದು ತಿಳಿಸಿದರು.
ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಗಂಗಣ್ಣ ಡಿಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ರಾಮಕೃಷ್ಣ ಭಜಂತ್ರಿ, ಸದಸ್ಯರಾದ ಎಸ್.ಎಸ್.ಪಾಷಾ, ರಾಜಾಸಾಬ ಗಾಂಧಿನಗರ, ಬಸವರಾಜ ವಿಶ್ವಕರ್ಮ, ರವಿ ಬಸಾಪುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.