ADVERTISEMENT

ಹುಚ್ಚರಂತೆ ಮಾತನಾಡುವ ಎಚ್‌ಡಿಕೆ, ಅಶೋಕ: ಸಚಿವ ಎನ್.ಎಸ್.ಬೋಸರಾಜು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 21:53 IST
Last Updated 4 ಅಕ್ಟೋಬರ್ 2024, 21:53 IST
ಎನ್.ಎಸ್. ಬೋಸರಾಜು
ಎನ್.ಎಸ್. ಬೋಸರಾಜು   

ರಾಯಚೂರು: ‘ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸಿದ್ದರಾಮಯ್ಯ ವಿರುದ್ಧ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸರ್ಕಾರ ಕೆಡವಲು ಸಂಚು ರೂಪಿಸುತ್ತಿದ್ದಾರೆ. ಇಬ್ಬರ ವಿರುದ್ಧ ಸ್ವಪಕ್ಷದ ನಾಯಕರೇ ಬಹಿರಂಗವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.

‘ಕುಮಾರಸ್ವಾಮಿ ಅವರು ಕೇಂದ್ರದಿಂದ ಅನುದಾನ ತಂದು ರಾಜ್ಯದ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಧಿಕಾರದಿಂದ‌ ಕೆಳಗಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಗರಣ ನಡೆದಿದೆ ಎಂದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರಿಗೆ ಜನರ ಬಗ್ಗೆ ಕಾಳಜಿಯಿಲ್ಲ. 70 ವರ್ಷಗಳಲ್ಲಿ ಕಾಣದಂತಹ ಕಲುಷಿತ ರಾಜಕಾರಣ‌ ಮಾಡುತ್ತಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐ, ಇ.ಡಿ ಹಾಗೂ ಇತರೆ ತನಿಖಾ‌ ಸಂಸ್ಥೆಗಳನ್ನು ದುರುಪಯೋಗ‌ಪಡಿಸಿಕೊಂಡು ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಲು ಹುನ್ನಾರ‌ ನಡೆಸುತ್ತಿದೆ.‌ ಈಗ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೆಡವಲು ಮುಂದಾಗಿದೆ. ಕಾಂಗ್ರೆಸ್ ಪಕ್ಷದವನ್ನು ಕಟ್ಟಿಹಾಕಲು ಮುಂದಾಗಿದೆ’ ಎಂದು ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.