ADVERTISEMENT

ರಾಯಚೂರು: ಭಾರದ ಕಲ್ಲು ಎಳೆಯುವ ರಾಷ್ಟ್ರಮಟ್ಟದ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 7:18 IST
Last Updated 22 ಜೂನ್ 2024, 7:18 IST
   

ರಾಯಚೂರು: ಕಾಪು ಸಮಾಜ ವತಿಯಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನವಾದ ಶನಿವಾರ ರಾಜೇಂದ್ರ ಗಂಜ್‌ನಲ್ಲಿ ಎರಡು ಟನ್ ಭಾರದ ಕಲ್ಲು ಎಳೆಯುವ ರಾಷ್ಟ್ರಮಟ್ಟದ ಸ್ಪರ್ಧೆ ಆರಂಭವಾಗಿದೆ.

ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಿದ್ದಾರೆ. ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿರುವ ಕಾರಣ ಭಾರ ಎಳೆಯುತ್ತಿರುವ ಎತ್ತುಗಳಿಗೆ ಅನುಕೂಲವಾಗಿದೆ.

ಸ್ಪರ್ಧೆಯನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.