ಸಿಂಧನೂರು: ತಾಲ್ಲೂಕಿನ ಶ್ರೀಪುರಂ ಜಂಕ್ಷನ್ ಬಳಿಯ ಸೇತುವೆ ಮೇಲೆ ಭಾನುವಾರ ಮಧ್ಯಾಹ್ನ ಬಸ್ವೊಂದು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗಂಗಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಹನುಮಂತ ಸೋಮಪ್ಪ ಜೋಗಿನ್(44) ಮೃತರು. ಸಿಂಧನೂರು ತಾಲ್ಲೂಕಿನ ಅಮರಾಪುರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಅವರು ತಮ್ಮ ಊರಿಗೆ ಹೋಗಲು ಶ್ರೀಪುರಂ ಜಂಕ್ಷನ್ ಬಳಿ ಇರುವ ಸೇತುವೆ ಮೇಲೆ ನಡೆದುಕೊಂಡು ಹೊರಟ್ಟಿದ್ದರು. ಈ ವೇಳೆ, ಕೊಪ್ಪಳದಿಂದ ರಾಯಚೂರಿಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಮನೆಯವರೆಗೆ ಒಪ್ಪಿಸಲಾಯಿತು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.