ADVERTISEMENT

ಸಿಂಧನೂರು | ಗೂಂಡಾವರ್ತನೆ; ವಾರ್ಡನ್ ಅಮಾನತಿಗೆ ಟಿಯುಸಿಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜೂನ್ 2023, 12:30 IST
Last Updated 27 ಜೂನ್ 2023, 12:30 IST
ಎಂ.ಗಂಗಾಧರ್
ಎಂ.ಗಂಗಾಧರ್   

ಸಿಂಧನೂರು: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯದ ಕಾರ್ಮಿಕರಿಗೆ ನಿಂದಿಸಿ, ಬೆದರಿಕೆ ಹಾಕಿ ಗೂಂಡಾವರ್ತನೆ ತೋರುತ್ತಿರುವ ವಾರ್ಡನ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಕರ್ನಾಟಕ ರಾಜ್ಯ ವಸತಿ ನಿಲಯಗಳ ಕಾರ್ಮಿಕ ಸಂಘ (ಟಿಯುಸಿಐ) ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ್ ಅವರು ಆಗ್ರಹಿಸಿದ್ದಾರೆ.

ಮಂಗಳವಾರ ಹೇಳಿಕೆ ನೀಡಿರುವ ಅವರು, ಕಾರ್ಮಿಕರ ಬಾಕಿ ವೇತನ ಪಾವತಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಹ ಪಾವತಿಸಿಲ್ಲ ಎಂದು ದೂರಿದ್ದಾರೆ.

ಸಿಂಧನೂರು ಸೇರಿದಂತೆ ಮಸ್ಕಿ ತಾಲೂಕಿನ ಮೂರ್ನಾಲ್ಕು ವಸತಿ ನಿಲಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ಎಲ್ಲ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸಮರ್ಪಕವಾದ ಊಟ-ಉಪಹಾರ ನೀಡದಿರುವ ಆರೋಪವೂ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.