ADVERTISEMENT

‘ಆರೋಗ್ಯ ಕ್ಷೇತ್ರದಲ್ಲಿ ಶೂಶ್ರೂಷಕರ ಕೊಡುಗೆ ಅನನ್ಯ‘

ರಾಜಯೋಗಿನಿ ಸ್ಮಿತಾ ಅಕ್ಕ ಬಣ್ಣನೆ

​ಪ್ರಜಾವಾಣಿ ವಾರ್ತೆ
Published 12 ಮೇ 2024, 16:12 IST
Last Updated 12 ಮೇ 2024, 16:12 IST
ರಾಯಚೂರಿನ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಶೂಶ್ರೂಷಕರ ದಿನಾಚರಣೆ ಕಾರ್ಯಕ್ರಮವನ್ನು ರಾಜಯೋಗಿನಿ ಸ್ಮಿತಾ ಅಕ್ಕ ಉದ್ಘಾಟಿಸಿದರು
ರಾಯಚೂರಿನ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಶೂಶ್ರೂಷಕರ ದಿನಾಚರಣೆ ಕಾರ್ಯಕ್ರಮವನ್ನು ರಾಜಯೋಗಿನಿ ಸ್ಮಿತಾ ಅಕ್ಕ ಉದ್ಘಾಟಿಸಿದರು   

ರಾಯಚೂರು: ‘ಆರೋಗ್ಯ ಕ್ಷೇತ್ರದಲ್ಲಿ ವೈದ್ಯರ ಜತೆಗೆ ಶೂಶ್ರೂಷಕರ ಸೇವೆ ಮಹತ್ವದ್ದಾಗಿದೆ. ಯಾವುದೇ ತಾರತಮ್ಯ ಮಾಡದೇ ರೋಗಿಗಳ ಆರೈಕೆ ಮಾಡುವ ಮೂಲಕ ಸಾಮಾಜಿಕ ಕಳಕಳಿ ತೋರುತ್ತಿದ್ದಾರೆ‘ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ರಾಜಯೋಗಿನಿ ಸ್ಮಿತಾ ಅಕ್ಕ ಬಣ್ಣಿಸಿದರು.

ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ಭಾನುವಾರ ಅಂತರ ರಾಷ್ಠ್ರೀಯ ಶೂಶ್ರೂಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

‘ಕೋವಿಡ್ ವೇಳೆಯಲ್ಲಿ ನಮ್ಮವರನ್ನು ನಾವೇ ಮುಟ್ಟಲಿಲ್ಲ, ಮಾತನಾಡಿಸಲಿಲ್ಲ ಆದರೆ ಆಸ್ಪತ್ರೆಗಳಲ್ಲಿ ಯಾವ ಸಂಬಂಧ ಪರಿಚಯವೇ ಇಲ್ಲದ ದಾದಿಯರು ತಮ್ಮ ಜೀವದ ಹಂಗನ್ನು ತೊರೆದು ರೋಗಿಗಳಿಗೆ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ. ದೇಶಕ್ಕೆ  ವೈದ್ಯರು ಮತ್ತು ದಾದಿಯರು ಬೆನ್ನೆಲುಬಾಗಿದ್ದಾರೆ’ ಎಂದು ಹೇಳಿದರು.

ADVERTISEMENT

ಇದೇ ವೇಳೆ ನೇತ್ರ ತಪಾಸಣಾ ಶಿಬಿರ ನಡೆಯಿತು. ಭಾರತೀಯ ರೆಡ್ ಕ್ರಾಸ್‌ನ ದಂಡಪ್ಪ ಬಿರಾದಾರ  ಮಾತನಾಡಿದರು. ಈಶ್ವರೀಯ ವಿದ್ಯಾಲಯದ ವ್ಯವಸ್ಥಾಪಕಿ ಶಾರದಾ ಅಕ್ಕ, ಸುಪ್ರಿಂಕೋರ್ಟ್ ವಕೀಲ ಕೆ. ದೇವಣ್ಣ ನಾಯಕ, ಸಿ.ಬಿ. ಪಾಟೀಲ, ಜಗದೀಶ, ನಾಗಚಂದ್ರರೆಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.