ಮಾನ್ವಿ: ತಾಲ್ಲೂಕಿನಲ್ಲಿ ಹರಿಯುವ ತುಂಗಭದ್ರಾ ನದಿ ನೀರಿಲ್ಲದೆ ಬತ್ತಿದ್ದು ಸಂಕ್ರಾಂತಿ ಪುಣ್ಯಸ್ನಾನಕ್ಕೆ ಬಂದಿದ್ದ ಜನರು ನಿರಾಸೆಗೆ ಕಾರಣವಾಯಿತು.
ಜನರು ಪುಣ್ಯಸ್ನಾನಕ್ಕಾಗಿ ರಾಜಲಬಂಡಾ ಅಣೆಕಟ್ಟು, ಚೀಕಲಪರ್ವಿ ಮತ್ತಿತರ ನದಿಪಾತ್ರದ ಗ್ರಾಮಗಳಿಗೆ ತೆರಳುತ್ತಿದ್ದರು. ಆದರೆ ಈ ಬಾರಿ ಮಳೆ ಕೊರತೆಯಿಂದ ತುಂಗಭದ್ರಾ ಜಲಾಶಯ ಭರ್ತಿಯಾಗದ ಕಾರಣ ನದಿಯಲ್ಲಿ ನೀರು ಹರಿಯುತ್ತಿಲ್ಲ. ಪ್ರವಾಸಿಗರ ನೆಚ್ಚಿನ ತಾಣವಾಗಿರುವ ರಾಜಲಬಂಡಾ ಅಣೆಕಟ್ಟು ನೀರಿಲ್ಲದೆ ಭಣಗುಡುತ್ತಿದೆ.
ಸೋಮವಾರ ಸಂಕ್ರಾಂತಿ ಹಬ್ಬದ ಪುಣ್ಯ ಸ್ನಾನಕ್ಕಾಗಿ ಪಕ್ಕದ ಲಿಂಗಸೂಗುರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕುಗಳಲ್ಲಿ ಹರಿಯುವ ಕೃಷ್ಣಾ ನದಿ ತೀರದ ಸ್ಥಳಗಳಿಗೆ ಹೋಗುವ ಸಂಭವ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.