ತುರ್ವಿಹಾಳ: ಪಟ್ಟಣದ ಮೈಬುಸಾಬ್ ಅವರ ಮನೆಯಲ್ಲಿ ಈಚೆಗೆ ನಡೆದ ಅಂದಾಜು ₹1.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ, ಬಂಧಿತನಿಂದ ಆಭರಣ ವಶಕ್ಕೆ ಪಡೆದಿದ್ದಾರೆ.
ದೇವದುರ್ಗ ತಾಲ್ಲೂಕಿನ ಜಾಗೀರ ಜಾಡಲದಿನ್ನಿಯ ನಾಗರಾಜ ಮೂರ್ತೆಪ್ಪ ದೇವರಮನಿ ಬಂಧಿತ ಆರೋಪಿ.
ಕಳವು ನಡೆದ ಐದು ದಿನಗಳಲ್ಲಿ ಆರೋಪಿಯನ್ನು ಪತ್ತೆ ಮಾಡಿದ ಸಬ್ ಇನ್ಸ್ಪೆಕ್ಟರ್ ಸುಜಾತಾ, ಸಿಬ್ಬಂದಿ ಶಿವರಾಜಪ್ಪ, ಅಮರೇಶ, ವಿಶ್ವನಾಥ, ಚೌಡಯ್ಯ, ಅಸ್ಲಂ ಪಾಶಾ ಮತ್ತು ಅಪ್ಜಲ್ ಪಾಶಾ ಅವರಿದ್ದ ತನಿಖಾ ತಂಡದ ಕಾರ್ಯಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.