ಲಿಂಗಸುಗೂರು(ರಾಯಚೂರು ಜಿಲ್ಲೆ): ತಾಲ್ಲೂಕಿನ ಜಾವೂರ ಕ್ರಾಸ್ ಬಳಿ ನಾರಾಯಣಪುರ ಬಲದಂಡೆ ಮುಖ್ಯ ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ತಾಲ್ಲೂಕಿನ ಬೆಂಡೋಣಿ ಗ್ರಾಮದ ಲಕ್ಕಪ್ಪ ವಿರುಪಾಕ್ಷಪ್ಪ ಕಮರಿ (25), ಬಸವಂತ ಶರಣಪ್ಪ ಉಪ್ಪಾರ (27) ಎಂದು ಗುರುತಿಸಲಾಗಿದೆ.
ಯುವಕರು ಕಾಲುವೆಯಲ್ಲಿ ಮುಳಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕಾಲುವೆಯಿಂದ ಹೊರಗಡೆ ತರುವಷ್ಟರಲ್ಲಿ ಯುವಕರು ಕೊನೆಯುಸಿರು ಎಳೆದಿದ್ದಾರೆ.
ಘಟನಾ ಸ್ಥಳಕ್ಕೆ ತಲಪುವಷ್ಟರಲ್ಲಿ ಸ್ಥಳೀಯ ಈಜುಗಾರರು ಯುವಕರ ಮೃತದೇಹ ಹೊರಗಡೆ ತಂದಿದ್ದರು ಎಂದು ಅಗ್ನಿ ಶಾಮಕ ಠಾಣಾಧಿಕಾರಿ ಹೊನ್ನಪ್ಪ ದೊಡಮನಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.