ADVERTISEMENT

ಒಂದೂವರೆ ವರ್ಷದ ಮಗನನ್ನು ನದಿಗೆ ಎಸೆದ ತಾಯಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 5:58 IST
Last Updated 20 ಡಿಸೆಂಬರ್ 2023, 5:58 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚನ್ನಪಟ್ಟಣ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದುಕೊಂಡು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಗಂಡು ಮಗುವನ್ನು ನದಿಗೆ ಎಸೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕಾಲಿಕೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಭಾಗ್ಯ ಎಂಬಾಕೆ ತನ್ನ ಮಗ ದೇವರಾಜುನನ್ನು ಕೊಲೆ ಮಾಡಿದ ಆರೋಪಿ. ಈ ಕುರಿತು ಪತಿ ನೀಡಿದ ದೂರಿನ ಮೇರೆಗೆ ಅಕ್ಕೂರು ಠಾಣೆ ಪೊಲೀಸರು ಭಾಗ್ಯಳನ್ನು ಬಂಧಿಸಿದ್ದಾರೆ. ಬುಧವಾರ ಬೆಳಿಗ್ಗೆ ನದಿಯಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಹೊರಕ್ಕೆ ತೆಗೆಯಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಟಿ.ಟಿ. ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.