ADVERTISEMENT

ರಾಮನಗರ | ಕಂಟೇನರ್ ಡಿಕ್ಕಿ: ಸಾವು

​ಪ್ರಜಾವಾಣಿ ವಾರ್ತೆ
Published 2 ಮೇ 2024, 14:12 IST
Last Updated 2 ಮೇ 2024, 14:12 IST

ರಾಮನಗರ: ನೈಸ್ ರಸ್ತೆ ಬಳಿ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದಿದ್ದರಿಂದ ಸ್ಕೂಟರ್ ಸವಾರ ಮೋಹನ್ ಎನ್. (57) ಬುಧವಾರ ಮೃತಪಟ್ಟಿದ್ದಾರೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾತಗುಣಿ ನಿವಾಸಿಯಾದ ಮೋಹನ್ ಅವರು ಕಾರ್ಯನಿಮಿತ್ತ ಕಾಮಾಕ್ಷಿಪಾಳ್ಯಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ಹೇಳಿ ಬೆಳಿಗ್ಗೆ ಹೊರಟ್ಟಿದ್ದರು.

ಸ್ಕೂಟರ್‌ನಲ್ಲಿ ಮುಂದೆ ಹೋಗುತ್ತಿದ್ದ ಮೋಹನ್ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಡಿಕ್ಕಿ ಹೊಡಿದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು. ಮೋಹನ್ ಅವರಿಗೆ ಪತ್ನಿ ಮತ್ತು ಮೂವರು ಪುತ್ರಿಯರಿದ್ದಾರೆ. ಘಟನೆ ಕುರಿತು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT