ADVERTISEMENT

ವೈಜ್ಞಾನಿಕ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ವೈಜ್ಞಾನಿಕ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 14:01 IST
Last Updated 26 ಜುಲೈ 2024, 14:01 IST


ಮಾಗಡಿ: ತಾಲ್ಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆರು ದಿನಗಳ ವೈಜ್ಞಾನಿಕ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಆ.5 ರಿಂದ 10ರವರೆಗೆ ನಡೆಯಲಿರುವ ತರಬೇತಿಗೆ ಮೊದಲು ನೋಂದಾಯಿಸುವ 15 ಜನರಿಗೆ ಮಾತ್ರ ಅವಕಾಶವಿದ್ದು, 35 ವರ್ಷದೊಳಗಿನ ಆಸಕ್ತ ರೈತರು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಲತಾ ಆರ್. ಕುಲಕರ್ಣಿ ತಿಳಿಸಿದ್ದಾರೆ.

ಮಾಹಿತಿಗೆ ಕೇಂದ್ರದ ಸಸ್ಯಸಂರಕ್ಷಣಾ ವಿಜ್ಞಾನಿಗಳಾದ ಡಾ.ರಾಜೇಂದ್ರ ಪ್ರಸಾದ್. ಬಿ.ಎಸ್.(98443 05002) ಮತ್ತು ಕೃಷಿ ವಿಸ್ತರಣಾ ವಿಜ್ಞಾನಿಗಳಾದ ಡಾ. ಸೌಜನ್ಯ, ಎಸ್.(8310044681) ಅವರನ್ನು ಸಂಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.