ADVERTISEMENT

ಕುದೂರು | ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್‌ಗೆ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 7:35 IST
Last Updated 25 ಮಾರ್ಚ್ 2024, 7:35 IST
ಭಾನುವಾರ ನಡೆದ ಸುಗ್ಗನಹಳ್ಳಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರಿಗೆ ಕಾರ್ಯಕರ್ತರು ಸ್ವಾಗತ ನೀಡಿದರು.
ಭಾನುವಾರ ನಡೆದ ಸುಗ್ಗನಹಳ್ಳಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರಿಗೆ ಕಾರ್ಯಕರ್ತರು ಸ್ವಾಗತ ನೀಡಿದರು.   

ಕುದೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್  ಭಾನುವಾರ ಪಟ್ಟಣಕ್ಕೆ ಬಂದಿದ್ದರು.

ಸುಗ್ಗನಹಳ್ಳಿ ಲಕ್ಷ್ಮಿ ನರಸಿಂಹ ರಥೋತ್ಸವದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅವರನ್ನು ಕುದೂರು ಬಸ್ ನಿಲ್ದಾಣದ ಸಮೀಪ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ ಸ್ವಾಗತಿಸಿದರು.

ಮಾಗಡಿ, ಕುದೂರು ಪಟ್ಟಣ ಮತ್ತು ಹೋಬಳಿಯ ಬಿಜೆಪಿ, ಜೆಡಿಎಸ್ ಮುಖಂಡರು ಕಾರ್ಯಕರ್ತರು ಭೇಟಿಯಾಗಿ ಚರ್ಚಿಸಿದರು.

ADVERTISEMENT
ಕುದೂರು ಪಟ್ಟಣಕ್ಕೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಭಾನುವಾರ ಸುಗ್ಗನಹಳ್ಳಿ ಬ್ರಹ್ಮ ರಥೋತ್ಸವಕ್ಕೆ ತೆರಳುವ ವೇಳೆ ಆಗಮಿಸಿದ್ದರು.
ಕುದೂರು ಪಟ್ಟಣಕ್ಕೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಭಾನುವಾರ ಸುಗ್ಗನಹಳ್ಳಿ ಬ್ರಹ್ಮ ರಥೋತ್ಸವಕ್ಕೆ ತೆರಳುವ ವೇಳೆ ಆಗಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.