ADVERTISEMENT

ಕನಕಪುರದಲ್ಲಿ ಅಶೋಕ್ ಪರ ಸರಿಯಾಗಿ ಹಣ ಹಂಚಿಲ್ಲ: ರಾಮನಗರದಲ್ಲಿ ಬಿಜೆಪಿ ನಾಯಕರ ಹೊಡೆದಾಟ!

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 15:01 IST
Last Updated 23 ಜೂನ್ 2023, 15:01 IST

ರಾಮನಗರದ ಆರ್.ವಿ. ಕನ್ವೆನ್ಷನ್‌ ಹಾಲ್‌ನಲ್ಲಿ ಶುಕ್ರವಾರ ಕನಕಪುರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಮೇಶ್ ಹಾಗೂ ರೈತ ಮೋರ್ಚಾ ಅಧ್ಯಕ್ಷ ಪೈಲ್ವಾನ್ ಸಿದ್ದಮರಿಗೌಡ ಅವರು ಪರಸ್ಪರ ಕೊರಳ ಪಟ್ಟಿ ಹಿಡಿದು, ಕೈ–ಕೈ ಮಿಲಾಯಿಸಿ ಜಗಳವಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲನುಭವಿಸಿದ ಹಿನ್ನೆಲೆಯಲ್ಲಿ, ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು. ಸಂಸದ ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ ಸೇರಿದಂತೆ ಜಿಲ್ಲಾ ಮುಖಂಡರು ಭಾಗವಹಿಸಿದ್ದರು. ಹಣ ಹಂಚಿಕೆ ವಿಷಯಕ್ಕಾಗಿ ರಮೇಶ್ ಮತ್ತು ಸಿದ್ದಮರಿಗೌಡ ಅವರ ನಡುವೆ ಜಗಳ ಶುರುವಾಯಿತು. ಕನಕಪುರದಿಂದ ಸ್ಪರ್ಧಿಸಿದ್ದ ಆರ್. ಅಶೋಕ್ ಪರವಾಗಿ ರಮೇಶ್ ಅವರು ಕೆಲಸ ಮಾಡಿಲ್ಲ ಹಾಗೂ ಕಾರ್ಯಕರ್ತರಿಗೆ ಹಂಚಲು ಕೊಟ್ಟಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಸಿದ್ದಮರಿಗೌಡ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರ ನಡುವಣ ಮಾತಿನ ಚಕಮಕಿ ವಿಕೋಪಕ್ಕೆ ಕೈ ಮಿಲಾಯಿಸಿದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT