ಮಾಗಡಿ: ತಾಲ್ಲೂಕಿನ ಮುತ್ತಯನಕಟ್ಟೆ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಾಗಡಿ ನಿವಾಸಿ ವಸೀಂ (25) ಅವರು ಮೃತಪಟ್ಟಿದ್ದಾರೆ.
ರಾಮನಗರ ಕಡೆಯಿಂದ ಬರುತ್ತಿದ್ದ ಬಸ್ ಮತ್ತು ಮಾಗಡಿ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಜೊತೆಗೆ ಸವಾರ ಸಹ ಬಸ್ ಚಕ್ರದಡಿ ಸಿಲುದ್ದಾರೆ. ತಲೆ ಮೇಲೆ ಚಕ್ರ ಹತ್ತಿದ್ದರಿಂದ ವಸೀಂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಗಡಿ ಠಾಣೆ ಪೊಲೀಸರು, ಶವವನ್ನು ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿದರು. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.