ADVERTISEMENT

ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ CM, DCM ಸಾಥ್

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 7:41 IST
Last Updated 24 ಅಕ್ಟೋಬರ್ 2024, 7:41 IST
   

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ. ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಪಟ್ಟಣದಲ್ಲಿ ಗುರುವಾರ ಶುರುವಾಯಿತು.

ಪಟ್ಟಣದ ಚಿಕ್ಕಮಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಶುರುವಾದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಭೈರತಿ ಸುರೇಶ್, ರಾಮಲಿಂಗಾ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಾಗಿದ ಮೆರವಣಿಗೆ ತಹಶೀಲ್ದಾರ್ ಕಚೇರಿ ತಲುಪಿತು.

ADVERTISEMENT

ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್ ಧ್ವಜಗಳು ರಾರಾಜಿಸಿದವು. ಡೊಳ್ಳು, ತಮಟೆ ಕಲಾವಿದರು ಮೆರವಣಿಗೆಗೆ ಮೆರಗು ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.