ADVERTISEMENT

ಚನ್ನಪಟ್ಟಣ ಉಪ ಚುನಾವಣೆ: ಪೊಲೀಸ್, ಅರೆ ಸೇನಾಪಡೆ ಪಥ ಸಂಚಲನ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 8:31 IST
Last Updated 27 ಅಕ್ಟೋಬರ್ 2024, 8:31 IST
   

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆ‌ ಕಣವಾಗಿರುವ ತಾಲ್ಲೂಕಿನಲ್ಲಿ ಪೊಲೀಸರು ಮತ್ತು ಅರೆ ಸೇನಾಪಡೆ ಭಾನುವಾರ ಪಥ ಸಂಚಲನ ನಡೆಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗನೂರು, ತಗಚಗೆರೆ, ಕೋಡಂಬಳ್ಳಿ ಹಾಗೂ ಮೊಳೆದೊಡ್ಡಿ ಗ್ರಾಮಗಳಲ್ಲಿ ಜಿಲ್ಲಾ ಪಥ ಸಂಚಲನ ನಡೆಯಿತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್, ಚನ್ನಪಟ್ಟಣ ಡಿವೈಎಸ್ಪಿ ಕೆ.ಸಿ. ಗಿರಿ ಸೇರಿದಂತೆ ಸ್ಥಳೀಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಗಳು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.