ಚನ್ನಪಟ್ಟಣ: ತಾಲ್ಲೂಕಿನ ಕೋಲೂರು ಗೇಟ್ ಬಳಿಯ ಚೆಕ್ ಪೋಸ್ಟ್ನಲ್ಲಿ ಅಗತ್ಯ ದಾಖಲೆ ಇಲ್ಲದ ₹ 1 ಲಕ್ಷ ನಗದನ್ನು ಚುನಾವಣಾ ತನಿಖಾ ತಂಡ ಬುಧವಾರ ವಶಪಡಿಸಿಕೊಂಡಿದೆ.
ಬೆಂಗಳೂರು ಮೈಸೂರು ಹೆದ್ದಾರಿಯ ಕೋಲೂರು ಗೇಟ್ ಬಳಿ ನಿರ್ಮಿಸಿರುವ ಚೆಕ್ ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕಾರೊಂದರಲ್ಲಿ ಅಗತ್ಯ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 1 ಲಕ್ಷ ನಗದು ಇರುವುದು ಪತ್ತೆಯಾಗಿದೆ.
ಕಾರು ಚಾಲಕನನ್ನು ಈ ಬಗ್ಗೆ ವಿಚಾರಣೆ ನಡೆಸಿದಾಗ ಅಗತ್ಯ ದಾಖಲೆ ಒದಗಿಸಲು ವಿಫಲವಾದ ಕಾರಣ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.