ADVERTISEMENT

ಬಿಎಸ್‌ವೈ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ: ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 10:08 IST
Last Updated 14 ಜೂನ್ 2024, 10:08 IST
ಸಿ.ಪಿ. ಯೋಗೇಶ್ವರ್
ಸಿ.ಪಿ. ಯೋಗೇಶ್ವರ್   

ಚ‌ನ್ನಪಟ್ಟಣ (ರಾಮನಗರ): ‘ಯಾವುದೊ ಮುಗಿದು ಹೋಗಿರುವ ಕಥೆಯನ್ನಿಟ್ಟುಕೊಂಡು ಕಾಂಗ್ರೆಸ್‌ನವರು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದರು.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿರುವ ಕುರಿತು, ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅನವಶ್ಯಕವಾಗಿ ಬಿ.ಎಸ್. ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಅವರು ಕಾನೂನು ಹೋರಾಟ ಮಾಡಲಿದ್ದು, ಅವರಿಗೇನೂ ತೊಂದರೆಯಾಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT