ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ನಗರದ ಉಪ ನೋಂದಣಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಪ ನೋಂದಣಾಧಿಕಾರಿ ಕಚೇರಿಯು ಈ ಹಿಂದೆ ನಗರದ ಕುವೆಂಪುನಗರದ ಒಂದನೇ ಅಡ್ಡರಸ್ತೆಯ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಮೂಲ ಸೌಕರ್ಯಗಳಿಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇತ್ತೀಚಿಗೆ ನಗರದ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿತ್ತು. ಶುಕ್ರವಾರ ನೂತನ ಕಟ್ಟಡಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಕಚೇರಿಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ತಾಲ್ಲೂಕಿನಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲು ಆಗಮಿಸಿದ ಡಿ.ಕೆ.ಶಿವಕುಮಾರ್ ಮೊದಲು ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಮಾತನಾಡಿಸಿದರು. ನಂತರ ಸಾರ್ವಜನಿಕರನ್ನು ಮಾತನಾಡಿಸಿ ಸಮಸ್ಯೆಗಳನ್ನು ಆಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.