ಕುದೂರು: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿಯಿತು. ಮಧ್ಯಾಹ್ನ 3ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ ಬಳಿಕ ಜೋರಾಗಿ ಒಂದು ಗಂಟೆ ಕಾಲ ಸುರಿಯಿತು.
ಪಟ್ಟಣದ ಸಂತೆ ಸರ್ಕಲ್ ಬಳಿ ಮಳೆ ನೀರು ಸರಾಗವಾಗಿ ಹರಿಯದ ಕಾರಣ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ತೊಂದರೆ ಅನುಭವಿಸಿದರು. ಕೆಲ ದಿನಗಳ ಬಿಡುವಿನ ಬಳಿಕ ಸುರಿದ ಮಳೆಗೆ ರೈತಾಪಿ ವರ್ಗ ಸಂತಸಪಟ್ಟಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.