ಕನಕಪುರ: ತಾಲ್ಲೂಕಿನ ಸುಂಡಘಟ್ಟ ಗ್ರಾಮದಲ್ಲಿ ಫೆ. 2ರಂದು ಶಿವಪ್ಪ ಎಂಬುವರ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ನಗದು, ಆಭರಣ ವಶಪಡಿಸಿಕೊಂಡಿದ್ದಾರೆ.
ಕನಕಪುರದ ಐಬಿ ಬಡಾವಣೆ, ಪ್ರಶಾಂತ ನಗರದ ನಿವಾಸಿ ಕೆ.ವಿ.ಕೃಷ್ಣ (42) ಶಿವನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶ್ (33), ಕನಕಪುರ ಅಂಬೇಡ್ಕರ್ ನಗರದ ನಿವಾಸಿ ಮಲ್ಲೇಶ್ (35), ಕನಕಪುರ ನವಾಜಿ ಬೋರೆ ನಿವಾಸಿ ವಿಶ್ವನಾಥ (35) ಬಂಧಿತರು.
ಕೋಡಿಹಳ್ಳಿ ಪೊಲೀಸರು ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣ.ಕೆ.ಎಲ್ ನೇತೃತ್ವದ ತಂಡವು ತನಿಖೆ ನಡೆಸಿ ಫೆ. 19ರಂದು ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಪೊಲೀಸ್ ಕಸ್ಟಡಿಗೆ ಪಡೆದು ಆರೋಪಿಗಳಿಂದ 157 ಗ್ರಾಂ ಚಿನ್ನಾಭರಣ. 50 ಗ್ರಾಂ ಬೆಳ್ಳಿ, ಮೂರೂವರೆ ಲಕ್ಷ ನಗದು ವಶಪಡಿಸಿಕೊಂಡಿದ್ದರು.
ಬಂಧಿತ ಆರೋಪಿಗಳು ಹಣದ ಸಮಸ್ಯೆಯಿಂದ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.