ADVERTISEMENT

ಅಭ್ಯರ್ಥಿ ಆಯ್ಕೆ: ದೆಹಲಿಗೆ ಬಿಜೆಪಿ ವರಿಷ್ಠರ ಬುಲಾವ್

ಮೈತ್ರಿ ಪಟ್ಟಿ ಶೀಘ್ರ ಬಿಡುಗಡೆ: ನಿಖಿಲ್‌ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 15:50 IST
Last Updated 16 ಫೆಬ್ರುವರಿ 2024, 15:50 IST
ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ   

ರಾಮನಗರ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಬಿಡುಗಡೆ ಮಾಡುವ ಸಂಬಂಧ ಚರ್ಚಿಸಲು ಬಿಜೆಪಿ ವರಿಷ್ಠರು ದೆಹಲಿಗೆ ಬರುವಂತೆ ಕರೆದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರ ಜೊತೆ ಚರ್ಚಿಸಿ ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ ಎಂದರು.

‘ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎಂದು ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು 5 ಲಕ್ಷಕ್ಕಿಂತ ಅಧಿಕ ಮತ ಕೊಟ್ಟಿದ್ದಾರೆ. ಮತ್ತೆ ಸ್ಪರ್ಧಿಸುವ ಕುರಿತು ಮುಂದೆ ಚರ್ಚಿಸೋಣ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಹಳೆ ಮೈಸೂರು ಭಾಗದ ಪಕ್ಷದ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಶೀಘ್ರದಲ್ಲೇ ಆ ಭಾಗದ ಎಲ್ಲಾ ತಾಲ್ಲೂಕುಗಳಿಗೂ ಪ್ರವಾಸ ಮಾಡುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.