ADVERTISEMENT

ಚನ್ನಪಟ್ಟಣ ಉಪಚುನಾವಣೆ: JDS ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 7:35 IST
Last Updated 25 ಅಕ್ಟೋಬರ್ 2024, 7:35 IST
   

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸುವ ಸಲುವಾಗಿ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ನಿಖಿಲ್ ಅವರಿಗೆ ತಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಆರ್‌. ಅಶೋಕ್, ಡಾ.‌ ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಸೇರಿದಂತೆ ಮೈತ್ರಿ ಪಕ್ಷಗಳ ನಾಯಕರು ಸಾಥ್ ನೀಡಿದರು.

ಪಟ್ಟಣದ ಶೇರು ಹೋಟೆಲ್ ವೃತ್ತದಿಂದ ಶುರುವಾದ ರೋಡ್ ಶೋ, ಸಾತನೂರು ವೃತ್ತದ ಬಳಿ ಇರುವ ಚುನಾವಣಾ ಅಧಿಕಾರಿ ಕಚೇರಿವರೆಗೆ ಅರ್ಧ ಕಿಲೋಮೀಟರ್ ದೂರದಷ್ಟು ನಡೆಯಿತು.

ADVERTISEMENT

ರೋಡ್ ಶೋಗೂ ಮುಂಚೆ ನಿಖಿಲ್ ಅವರು, ಕೆಂಗಲ್‌ನಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ನಂತರ, ಅಲ್ಲಿಂದ ನೂರಾರು ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ನಿಖಿಲ್ ಅವರನ್ನು ಚನ್ನಪಟ್ಟಣದತ್ತ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.