ಹಾರೋಹಳ್ಳಿ: ತಾಲೂಕಿನ ಮರಳವಾಡಿ ಗ್ರಾಮದ ಬಳಿ ಶನಿವಾರ ಮತದಾರರಿಗೆ ಹಂಚಲು ತೆಗೆದುಕೊಂಡು ಹೊರಟಿದ್ದ ಕುಕ್ಕರ್, ತವಾ ಇದ್ದ ವಾಹನವನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ.
ಮರಳವಾಡಿ ಗ್ರಾಮದಲ್ಲಿ ಮನೆ, ಮನೆಗೆ ಕುಕ್ಕರ್, ತವಾ ಹಂಚಿಕೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ತವಾ, ಕುಕ್ಕರ್ ಗಿಫ್ಟ್ ಬಾಕ್ಸ್ ಮೇಲೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್,ಸಂಸದ ಡಿ.ಕೆ ಸುರೇಸ್, ಶಾಸಕ ಇಕ್ಬಾಲ್ ಹುಸೇನ್ ಅವರ ಭಾವಚಿತ್ರ ಇವೆ. ಗ್ರಾಮದಲ್ಲಿ ಸಂಜೆ ಗಿಫ್ಟ್ ಬಾಕ್ಸ್ ಹಂಚಲಾಗುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಹಾರೋಹಳ್ಳಿ ತಹಸಿಲ್ದಾರ್ಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.