ADVERTISEMENT

Video: ಚನ್ನಪಟ್ಟಣದಲ್ಲಿ ಯಾರ ರಾಜಕೀಯ ಅಧ್ಯಾಯ ಮುಗಿಯುತ್ತೋ ನೋಡೋಣ: ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 13:26 IST
Last Updated 21 ಜೂನ್ 2024, 13:26 IST

‘ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮುಗಿಯುವುದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಅಧ್ಯಾಯವೊ ಅಥವಾ ಯೋಗೇಶ್ವರ್ ಅಧ್ಯಾಯವೊ ಎಂಬುದನ್ನು ಚುನಾವಣೆಯಲ್ಲಿ ನೋಡೋಣ’ ಎಂದು ಶಾಸಕ ಎಚ್‌.ಸಿ. ಬಾಲಕೃಷ್ಣ ತಿರುಗೇಟು ನೀಡಿದರು. ಮಾಗಡಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ತಲೆ ಕೆಟ್ಟ ರೀತಿಯಲ್ಲಿ ಮಾತನಾಡುವ ಯೋಗೇಶ್ವರ್ ಮಾತಿಗೆ ಮಹತ್ವ ಕೊಡಬೇಕಿಲ್ಲ. ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಾಗಿ ಇಂತಹ ರಾಜಕೀಯ ಗಿಮಿಕ್‌ನ ಮಾತುಗಳನ್ನಾಡುತ್ತಾರೆ. ಜನರೆದರು ನಮ್ಮನ್ನು ಖಳರನ್ನಾಗಿ ಮಾಡಲು ಹೊರಟಿದ್ದಾರೆ. ಆದರೆ, ಅದ್ಯಾವುದೂ ನಡೆಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.