ADVERTISEMENT

20 ಸಾವಿರ ರೌಡಿಶೀಟರ್‌ಗಳಿಗೆ ಬಿಜೆಪಿ ಕೇಸರಿ ಶಾಲಿನ ಸ್ವಾಗತ: ರಾಮಲಿಂಗಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 15:49 IST
Last Updated 4 ಜನವರಿ 2024, 15:49 IST
ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ
ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ   

ಚನ್ನಪಟ್ಟಣ: ‘ಬಿಜೆಪಿ ಆಡಳಿತ ಅವಧಿಯಲ್ಲಿ ಸುಮಾರು 20 ಸಾವಿರ ರೌಡಿಗಳ ಹೆಸರನ್ನು ರೌಡಿಶೀಟರ್‌ ಪಟ್ಟಿಯಿಂದ ತೆಗೆದು, ಕೇಸರಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಇದು ಬಿಜೆಪಿ ಕೊಟ್ಟ ಆಡಳಿತ ಮಾದರಿ’ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.

ಕರಸೇವಕನ ಬಂಧನ ಖಂಡಿಸಿ ಬಿಜೆಪಿ ಹೋರಾಟ ಕುರಿತು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಬಂಧಿತ ಶ್ರೀಕಾಂತ ಪೂಜಾರಿ ಮೇಲೆ 16 ಪ್ರಕರಣಗಳಿದ್ದು, ಕೋರ್ಟ್ ಆದೇಶದ ಮೇರೆಗೆ ಆತನನ್ನು ಬಂಧಿಸಲಾಗಿದೆ. ಪೊಲೀಸರು ಕಾನೂನು ಪ್ರಕಾರವೇ ಕೆಲಸ ಮಾಡಿದ್ದಾರೆ’ ಎಂದು ಸಮರ್ಥಿಸಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT