ADVERTISEMENT

ಚನ್ನಪಟ್ಟಣದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಆರಂಭ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 14:33 IST
Last Updated 19 ಜೂನ್ 2024, 14:33 IST

ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಚನ್ನಪಟ್ಟಣದ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕೆಂಗಲ್ ಆಂಜನೇಯ ದೇವಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾನು ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಟಣದ ಮಹಾಜನತೆಯ ಆಶೀರ್ವಾದ ಈಗ ನಮಗೆ ಬೇಕಾಗಿದೆ ಎಂದರು. ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.