ADVERTISEMENT

ಮಾಗಡಿ | ಕಾರು- ಬೈಕ್ ಅಪಘಾತ: ನೀರಗಂಟಿ ನಂಜುಂಡಯ್ಯ ಸಾವು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 7:06 IST
Last Updated 4 ಮಾರ್ಚ್ 2024, 7:06 IST
   

ಮಾಗಡಿ: ತಾಲ್ಲೂಕಿನ ಬೈರನಹಳ್ಳಿಯಲ್ಲಿ ಸೋಮವಾರ ಕಾರು - ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸೀಗೆಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾದಮಾರನಹಳ್ಳಿಯ ನೀರಗಂಟಿ ನಂಜುಂಡಯ್ಯ (48) ಮೃತಪಟ್ಟಿದ್ದಾರೆ.

ಬೆಳಿಗ್ಗೆ ನಂಜುಂಡಯ್ಯ ಅವರು ಗ್ರಾಮದಿಂದ ಬೈಕ್ ನಲ್ಲಿ ಮಾಗಡಿಗೆ ಹೋಗುವಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಂಜುಂಡಯ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ‌.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲನೆ ನಡೆಸಿ, ಶವವನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಗಡಿ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.