ADVERTISEMENT

ಗ್ಯಾನವಾಪಿ ಮಸೀದಿ ತೀರ್ಪು ಕುರಿತು ಆಕ್ಷೇಪಾರ್ಹ ಪೋಸ್ಟ್: ವಕೀಲನ ಬಂಧನ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 7:45 IST
Last Updated 13 ಫೆಬ್ರುವರಿ 2024, 7:45 IST
   

ರಾಮನಗರ: ಉತ್ತರಪ್ರದೇಶದ ಗ್ಯಾನವಾಪಿ ಮಸೀದಿಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ಕಲ್ಪಿಸಿದ ತೀರ್ಪು ಕುರಿತು ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ನಗರದ ವಕೀಲ ಹಾಗೂ ಎಸ್‌ಡಿಪಿಐ ಮುಖಂಡ ಚಾನ್‌ ಪಾಷ ಅವರನ್ನು ರಾಮನಗರ ಪುರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪಾಷ ಅವರ ಆಕ್ಷೇಪಾರ್ಹ ಪೋಸ್ಟ್ ಕುರಿತು ನಗರದ ಬಿಜೆಪಿ ಮುಖಂಡ ಪಿ. ಶಿವಾನಂದ ಅವರು ನೀಡಿದ್ದ ದೂರಿನ ಮೇರೆಗೆ, ಫೆ. 3ರಂದು ಪಾಷ ವಿರುದ್ಧ ಐಪಿಸಿ 504, 505(3) ಕಲಂಗಳಡಿ ಎಫ್ಐಆರ್ ದಾಖಲಾಗಿತ್ತು.

ಬೆಳಿಗ್ಗೆಯೇ ಪಾಷ ಅವರನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.