ADVERTISEMENT

ನೀರಾವರಿ ಸಮಸ್ಯೆ ಬಗೆಹರಿಸಿ

ಎಚ್‌.ಡಿ.ಕುಮಾರಸ್ವಾಮಿಗೆ ಶಾಸಕ ಬಾಲಕೃಷ್ಣ ಮನವಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 4:42 IST
Last Updated 11 ಜೂನ್ 2024, 4:42 IST
ಬಾಲಕೃಷ್ಣ, ಶಾಸಕ
ಬಾಲಕೃಷ್ಣ, ಶಾಸಕ   

ಮಾಗಡಿ: ‘ಮೇಕೆದಾಟು ಸೇರಿದಂತೆ ಬಯಲು ಸೀಮೆಯ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಶ್ರಮಿಸಬೇಕಿದೆ’ ಎಂದು ಶಾಸಕ ಬಾಲಕೃಷ್ಣ ತಮ್ಮ ‘ಎಕ್ಸ್’ ಖಾತೆ ಮೂಲಕ ಮನವಿ ಮಾಡಿದ್ದಾರೆ.

ದೇಶದ ಪ್ರಧಾನಮಂತ್ರಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ, ಮತ್ತು ರಾಜ್ಯದಿಂದ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕಾರ ನೂತನ ಸಚಿವರಿಗೆ ಶಾಸಕರು ಅಭಿನಂದನೆ ಸಲ್ಲಿಸಿ ಪೋಸ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಜ್ವಲಂತ ನೀರಾವರಿ ಸಮಸ್ಯೆಯಾಗಿ ಬಹು ಕಾಲದಿಂದ ಉಳಿದಿರುವ ಮೇಕೆದಾಟು, ಮಹಾದಾಯಿ ಮತ್ತು ಬಯಲು ಸೀಮೆಯ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೂತನ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಶ್ರಮಿಸಬೇಕು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT