ಕುದೂರು: ಸೋಲೂರು ಹೋಬಳಿಯ ಉದ್ದೇನಹಳ್ಳಿ ಗ್ರಾಮದಲ್ಲಿ ಒಂದೇ ದಿನ ಎರಡು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದೆ.
ಉದ್ದೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 500 ಗ್ರಾಂ ತೂಕದ ಬೆಳ್ಳಿ ಕಿರೀಟ ಹಾಗೂ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ಜತೆಗೆ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಮೈಮೇಲಿದ್ದ ನಾಲ್ಕು ಚಿನ್ನದ ತಾಳಿ, ಎರಡು ಬೆಳ್ಳಿ ತಾಳಿ ಮತ್ತು ನಾಲ್ಕು ಗಂಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೇವಾಲಯದ ಅರ್ಚಕ ಕೃಷ್ಣಮೂರ್ತಿ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.