ADVERTISEMENT

ಶಿವಮೊಗ್ಗ | ಬಸ್‌ ಡಿಕ್ಕಿ; ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 15:53 IST
Last Updated 23 ಜೂನ್ 2024, 15:53 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಶಿವಮೊಗ್ಗ: ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಊರುಗಡೂರು ವೃತ್ತದಲ್ಲಿ ಭಾನುವಾರ ನಡೆದಿದೆ.

ಸಂತೋಷ್‌ (23) ಮೃತ ಯುವಕ. ಸಾರಿಗೆ ಬಸ್‌ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಬೈಕ್‌ ಸವಾರ ಶ್ರೀರಾಮಪುರದಿಂದ ಊರುಗಡೂರು ಬಳಿ ಇರುವ ಹೋಟೆಲ್‌ನಲ್ಲಿ ಕೆಲಸ ಮಾಡಲು ತೆರಳುತ್ತಿರುವ ವೇಳೆ ಬೆಳಿಗ್ಗೆ 6.30ರ ವೇಳೆಗೆ ಅಪಘಾತ ಸಂಭವಿಸಿದೆ.

ADVERTISEMENT

ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.