ಶಿಕಾರಿಪುರ: ‘ಬಸವಣ್ಣನ ತತ್ವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಬಸವಾಶ್ರಮ ಮಾತೆ ಶರಣಾಂಬಿಕೆ ಸಲಹೆ ನೀಡಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಆಯೋಜಿಸಿದ್ದ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬಸವಣ್ಣ ವಚನಗಳ ಮೂಲಕ ಕ್ರಾಂತಿ ಮಾಡಿದರು. ವಚನಗಳ ಮೂಲಕ ನಾಡಿನ ಜನರಿಗೆ ಉತ್ತಮ ಸಂದೇಶ ನೀಡಿದರು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಸೇರಿ ಹಲವು ಶರಣರು ನುಡಿದಂತೆ ನಡೆದಿದ್ದರು. ಸಮಾಜದಲ್ಲಿದ್ದ ಮೌಢ್ಯ ಹಾಗೂ ಕಂದಾಚಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಜನರನ್ನು ಜಾಗೃತಗೊಳಿಸಿದ್ದರು. ಈ ತಾಲ್ಲೂಕು ಅಲ್ಲಮಪ್ರಭು, ಅಕ್ಕಮಹಾದೇವಿ, ಸತ್ಯಕ್ಕ ಸೇರಿ ಹಲವು ಶರಣ ಶರಣೆಯರಿಗೆ ಜನ್ಮ ನೀಡಿರುವುದು ಹೆಮ್ಮೆ ಪಡುವ ವಿಷಯವಾಗಿದೆ’ ಎಂದರು.
ವೀರಶೈವ ಮಹಾಸಭಾ ಪದಾಧಿಕಾರಿಗಳು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವಿ. ಈರೇಶ್ ಅಧ್ಯಕ್ಷತೆ ವಹಿಸಿದ್ದರು.
ಪುರಸಭೆ ಮುಖ್ಯಾಧಿಕಾರಿ ಭರತ್, ಉಪ ತಹಶೀಲ್ದಾರ್ ರವಿಕುಮಾರ್, ಮುಖಂಡರಾದ ಬಿ.ಡಿ. ಭೂಕಾಂತ್, ಕಾಂಚನಾ ಕುಮಾರ್, ಕೆ.ಪಿ. ಅಶ್ವಿನ್, ಸುಭಾಷ್ ಚಂದ್ರಸ್ಥಾನಿಕ್, ಶಂಭು, ಅಂಗಡಿ ಜಗದೀಶ್, ಕುಮಾರಸ್ವಾಮಿ ಹಿರೇಮಠ, ಜಗದೀಶ್ ಬಡಕಳ್ಳಿ, ಮಂಜಾಚಾರ್, ಕೊಟ್ರೇಶಪ್ಪ, ಬೇಗೂರು ಶಿವಪ್ಪ, ಪ್ಯಾಟೆ ಈರಪ್ಪ, ಜಯಣ್ಣ, ಪಿ. ರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.