ADVERTISEMENT

ಗೌರಿ ಲಂಕೇಶ್‌ ಹಂತಕರಿಗೆ ಸನ್ಮಾನ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 14:52 IST
Last Updated 21 ಅಕ್ಟೋಬರ್ 2024, 14:52 IST

ಶಿವಮೊಗ್ಗ: ಗೌರಿ ಲಂಕೇಶ್‌ ಹಂತಕರಿಗೆ ಸನ್ಮಾನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಗೌರಿ ಸ್ಮಾರಕ ಟ್ರಸ್ಟ್‌ ಹಾಗೂ ಗೌರಿ ಬಳಗದಿಂದ ಅಕ್ಟೋಬರ್‌ 22ರಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್‌. ಅಶೋಕ ತಿಳಿಸಿದ್ದಾರೆ. 

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಂದು ಬೆಳಿಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಗೌರಿ ಹಂತಕರಿಗೆ ಸನ್ಮಾನ ಮಾಡುತ್ತಿರುವುದು ಕುವೆಂಪು ನಾಡಿಗೆ ಅವಮಾನ’ ಎಂದು ಹೇಳಿದ್ದಾರೆ. 

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳು, ದಸಂಸ ಮುಖಂಡರು ಹಾಗೂ ಗೌರಿ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.